ವೇದಜೀವನ ಬ್ಲಾಗಿಗೆ ಸ್ವಾಗತ. ಸುವಿಚಾರಗಳು ಎಲ್ಲಿಂದಲಾದರೂ ಬರಲಿ, ಯಾರಿಂದಲಾದರೂ ಬರಲಿ, ಪೂರ್ವಾಗ್ರಹ ಪೀಡಿತರಾಗದೆ ಸ್ವೀಕರಿಸೋಣ.
ಸಂಸ್ಕೃತ ಸಂಭ್ರಮ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ
ಸಂಸ್ಕೃತ ಸಂಭ್ರಮ ಲೇಬಲ್‌ನೊಂದಿಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತದೆ. ಎಲ್ಲಾ ಪೋಸ್ಟ್‌ಗಳನ್ನು ತೋರಿಸಿ

ಬುಧವಾರ, ಮಾರ್ಚ್ 11, 2015

ಹಾಸನದಲ್ಲಿ ಸಂಸ್ಕೃತ ಸಂಭ್ರಮ - 11

ಮನಸಾ ಸತತಂ ಸ್ಮರಣೀಯಂ
ವಚಸಾ ಸತತಂ ವದನೀಯಂ
ಲೋಕಹಿತಂ ಮಮ ಕರಣೀಯಂ ||
     ಹಾಸನ ಜಿಲ್ಲಾ ಸಂಸ್ಕೃತ ಸಮ್ಮೇಳನದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ವೈಯಕ್ತಿಕ ಮತ್ತು ಸಮೂಹ ಗೀತೆಗಳು, ಭರತ ನಾಟ್ಯಗಳು, ಕಿರು ಸಂಸ್ಕೃತ ನಾಟಕಗಳು ಪ್ರೇಕ್ಷಕರ ಮನ ರಂಜಿಸಿದವು. ಕೆಲವು ಚೇತೋಹಾರಿ ಕಾರ್ಯಕ್ರಮಗಳ ಚಿತ್ರಗಳು ನಿಮಗಾಗಿ:



















ಹಾಸನದಲ್ಲಿ ಸಂಸ್ಕೃತ ಸಂಭ್ರಮ - 10


     ಜಿಲ್ಲಾ ಸಂಸ್ಕೃತ ಸಮ್ಮೇಳನದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಂಸ್ಕೃತ ಭಾರತಿಯ ಅಧ್ಯಕ್ಷರಾದ ಡಾ. ಪ್ರಸನ್ನ ಎನ್.ರಾವ್ ರವರು ಸಮ್ಮೇಳನ ಯಶಸ್ವಿಯಾಗಿ ನಡೆದ ಕುರಿತು ಹರ್ಷ ವ್ಯಕ್ತಪಡಿಸಿದರು. ಸಂಸ್ಕೃತದ ಅಧ್ಯಯನದಿಂದ ನಮ್ಮ ಸಂಸ್ಕೃತಿ ಉನ್ನತಿ ಕಾಣುವುದೆಂದು ಅವರು ಅಭಿಪ್ರಾಯಿಸಿದರು.


     ಸಂಸ್ಕೃತ ಶಿಕ್ಷಣ ನೀಡುವಲ್ಲಿ ಗಣನೀಯ ಸೇವೆ ಸಲ್ಲಿಸಿ ನಿವೃತ್ತರಾದ ಹಲವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಅಚ್ಚುಕಟ್ಟಾಗಿ ಊಟ ಮತ್ತು ಉಪಹಾರದ ವ್ಯವಸ್ಥೆ ಮಾಡಿದ ಅಡಿಗೆ ಕಂಟ್ರಾಕ್ಟರ್ ವೆಂಕಟೇಶರನ್ನು ಅಭಿನಂದಿಸಲಾಯಿತು.





     ಸಮ್ಮೇಳನದ ಯಶಸ್ಸಿಗೆ ಶ್ರಮ ವಹಿಸಿ ದುಡಿದ ಸಂಸ್ಕೃತ ಭಾರತಿಯ ದಕ್ಷಿಣ ಕರ್ನಾಟಕದ ಸಂಪರ್ಕ ಪ್ರಮುಖ ಶ್ರೀ ಶ್ರೀನಿವಾಸನ್ ಮತ್ತು ವೇದಭಾರತಿಯ ಸಂಯೋಜಕ ಶ್ರೀ ಹರಿಹರಪುರ ಶ್ರೀಧರರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ವಿದ್ಯಾರ್ಥಿಗಳ ಸಂಘಟನೆ ಮಾಡಿ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸುವಂತೆ ಮಾಡಿದ ರಕ್ಷಿತ್ ಭಾರದ್ವಾಜರನ್ನೂ ಅಭಿನಂದಿಸಲಾಯಿತು. ಹರಿಹರಪುರ ಶ್ರೀಧರ್ ಸಮ್ಮೇಳನದ ಯಶಸ್ಸಿಗೆ ಸಂಬಂಧಿಸಿದ ಎಲ್ಲರ ಸಂಘಟಿತ ಪ್ರಯತ್ನ ಕಾರಣವಾಗಿದೆಯೆಂದು ನುಡಿದರು. ವಂದೇಮಾತರಮ್ ನೊಂದಿಗೆ ಸಭಾಕಾರ್ಯಕ್ರಮ ಸಂಪನ್ನಗೊಂಡಿತು. ನಂತರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
-ಕ.ವೆಂ.ನಾಗರಾಜ್.

ಮಂಗಳವಾರ, ಮಾರ್ಚ್ 10, 2015

ಹಾಸನದಲ್ಲಿ ಸಂಸ್ಕೃತ ಸಂಭ್ರಮ - 9

     ಹಾಸನ ಜಿಲ್ಲಾ ಸಂಸ್ಕೃತ ಸಮ್ಮೇಳನದಲ್ಲಿ ಸಂಸ್ಕೃತಕ್ಕಾಗಿ ಕೆಲಸ ಮಾಡಿದ  ಕೆಲವರು ಹಿರಿಯರನ್ನು ಗೌರವಿಸಲಾಯಿತು. ಆ ಸಂಬಂಧಧ ಕೆಲವು ಚಿತ್ರಗಳಿವು:










ಭಾನುವಾರ, ಮಾರ್ಚ್ 8, 2015

ಹಾಸನದಲ್ಲಿ ಸಂಸ್ಕೃತ ಸಂಭ್ರಮ - 8

     ಹಾಸನ ಜಿಲ್ಲಾ ಸಂಸ್ಕೃತ ಸಮ್ಮೇಳನದ ಅಂಗವಾಗಿ 'ಸಂಸ್ಕೃತದ ಮಹತ್ವ' ಕುರಿತ ಸಂಸ್ಕೃತ ಭಾಷಣ, 'ಸಂಸ್ಕೃತದಲ್ಲಿ ವಿಜ್ಞಾನ' ಕುರಿತ ಕನ್ನಡ ಭಾಷಣ, ಸಂಸ್ಕೃತ ರಸಪ್ರಶ್ನೆ ಸ್ಪರ್ಧೆ, ಭಾರತೀಯತೆ ಕುರಿತ ಚಿತ್ರ ರಚನಾ ಸ್ಪರ್ಧೆ, ಹೀಗೆ ಹಲವು ಸ್ಪರ್ಧೆಗಳನ್ನು ಏರ್ಡಿಸಲಾಗಿತ್ತು. ಸ್ಪರ್ಧಾ ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನಗಳನ್ನು ವಿತರಿಸಲಾಯಿತು. ತತ್ಸಂಬಂಧದ ಕೆಲವು ಚಿತ್ರಗಳಿವು: